ವಾಣಿಜ್ಯ ಜಾಹಿರಾತು

ಉಳ್ಳಾಲ: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66 ರ ಜಪ್ಪಿನ ಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಲಿ ಇಂದು ಮುಂಜಾನೆ ವೇಳೆ ನಡೆದಿದೆ.

ತೊಕ್ಕೊಟ್ಟು ಅಂಬಿಕಾರೋಡ್ ನ ವೈನ್ & ಡೈನ್ ಬಾರ್ ಮ್ಯಾನೇಜರ್ , ಚಿಕ್ಕಮಗಳೂರು ಜಿಲ್ಲೆ,ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (27) ಮೃತರು.  ಪ್ರತಾಪ್ ಅವರ ಚಿಕ್ಕಮ್ಮನ ಮಗ, ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಕಿಗ್ಗ ನಿವಾಸಿ ಅಭಿ ಶೆಟ್ಟಿ(22)ಗಂಭೀರವಾಗಿ ಗಾಯಗೊಂಡಿದ್ದು, ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿ ಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು.ಪ್ರತಾಪ್ ಅವರ ಸಹೋದರ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನ ಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು, ಸವಾರ ಪ್ರತಾಪ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.