ವಾಣಿಜ್ಯ ಜಾಹಿರಾತು
ಕಾರ್ಕಳ: ರಸ್ತೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಹಾಗೂ ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ ಬಸ್ ಚಾಲಕ ಸೈಯದ್ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಕೆಎಸ್ಆರ್ಟಿಸಿ ಚಾಲಕನ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವಾಣಿಜ್ಯ ಜಾಹಿರಾತು