ವಾಣಿಜ್ಯ ಜಾಹಿರಾತು

ಮಂಗಳೂರು: ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್ ಅವರನ್ನು ಹಾಸನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಹಾಸನ ಎಸ್ಪಿಯಾಗಿದ್ದ ಶ್ರೀನಿವಾಸ್ ಗೌಡ ಅವರ ಸ್ಥಾನಕ್ಕೆ ಹರಿರಾಮ್ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹರಿರಾಮ್ ಶಂಕರ್ 20 ನವೆಂಬರ್ 2020 ರಂದು ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿ ಮಂಗಳೂರು ಪೊಲೀಸ್ ಕಮಿಷನರೇಟ್‌ಗೆ ಸೇರ್ಪಡೆಗೊಂಡರು. ಇವರು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಮರ್ಥ ಪೊಲೀಸ್ ಅಧಿಕಾರಿಯಾಗಿದ್ದಾರೆ, ಇವರು ಕುಂದಾಪುರ ಉಪವಿಭಾಗದ ಎಎಸ್‌ಪಿಯಾಗಿ ಹೆಚ್ಚುವರಿ ಪ್ರಭಾರವನ್ನು ಹೊಂದಿರುವಾಗ ಉಡುಪಿಯ ಕಾರ್ಕಳ ಉಪವಿಭಾಗದ ಡಿವೈಎಸ್‌ಪಿಯಾಗಿ ಕೆಲಸ ಮಾಡಿದ್ದಾರೆ.

ಕೇರಳದ ತ್ರಿಶೂರ್ ಮೂಲದವರಾದ ಹರಿರಾಮ್ ಶಂಕರ್ 2017ರ ಐಪಿಎಸ್ ಬ್ಯಾಚ್’ನ ಅಧಿಕಾರಿಯಾಗಿದ್ದಾರೆ. ಇವರು ಎನ್‌ಐಟಿ ಕ್ಯಾಲಿಕಟ್‌ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.