ವಾಣಿಜ್ಯ ಜಾಹಿರಾತು
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಧಿಸಿದ್ದ ಕೋವಿಡ್ ನಿರ್ಬಂಧಗಳನ್ನು ತೆರವು ಮಾಡಿ, ಸೇವೆಗಳಿಗೆ ಅನುವು ಮಾಡಿಕೊಡಲಾಗಿದೆ.
ರಾಜ್ಯ ಸರಕಾರದ ಆದೇಶದ ಮೇರೆಗೆ ಕೋವಿಡ್-19 ರ ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಿಕೊಂಡು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.1ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇರಿದಂತೆ, ಎಲ್ಲಾ ಸೇವೆಗಳನ್ನು ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ತಿಳಿಸಿದೆ.
ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರದ ಆದೇಶದಂತೆ ಈ ಹಿಂದೆ ದೇಗುಲದಲ್ಲಿ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ಇದೀಗ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಸೇವಾಕರ್ತರು ಕನಿಷ್ಠ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ವರದಿ ಹಾಜರಿ ಪಡಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ವಾಣಿಜ್ಯ ಜಾಹಿರಾತು