ವಾಣಿಜ್ಯ ಜಾಹಿರಾತು

ಮಂಗಳೂರು: ಕರಾವಳಿಯ ‌ಪ್ರಖ್ಯಾತ ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಳೂರು ಎಂಬಲ್ಲಿ ನಡೆದಿದೆ.

ಕರಾವಳಿಯ ಖ್ಯಾತ ಯಕ್ಷಗಾನ ಕಲಾವಿದರ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ ಮಾಡಿಕೊಂಡ ಕಲಾವಿದ. ಕೀರ್ತನ್ ಶೆಟ್ಟಿ ವಗೆನಾಡು ಮೂಳೂರು ಬಳಿಯ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಬಪ್ಪನಾಡು ಹಾಗೂ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂದರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕೀರ್ತನ್ ಶೆಟ್ಟಿ ವಗೆನಾಡು ಯಕ್ಷಗಾನದಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರಾಗಿದ್ದರು. ತೆಂಕುತಿಟ್ಟಿನ ಭಾಗವತಿಕೆಯಲ್ಲಿ ತನ್ನದೇ ಛಾಪನ್ನು ಮೂಡಿಸಿ ಕೀರ್ತನ್ ಶೆಟ್ಟಿ ವಗೆನಾಡು ನಿಧನ ಯಕ್ಷಗಾನ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.  ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.