ವಾಣಿಜ್ಯ ಜಾಹಿರಾತು

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ. ಡಿ.25ರಂದು ಸಂಜೆ ರಾಷ್ಟ್ರೀಯ ಹೆದ್ದಾರಿ ಲಾಯಿಲ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿ ಅವರ ಪುತ್ರ ಫೈಂಟರ್‌ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(21) ಮೃತ ದುರ್ದೈವಿ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ, ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ತರಕಾರಿ ಸಾಗಾಟದ ಖಾಲಿ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟು ಸವಾರ ಗಂಭೀರ ಗಾಯಗೊಂಡಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾರಗಳ ಹಿಂದೆ ಇದೇ ಸ್ಥಳದ ಸ್ವಲ್ಪ ದೂರದಲ್ಲಿ ಅಪಘಾತ ನಡೆದು ಬೈಕ್‌ ಸವಾರ ಮೃತಪಟ್ಟಿದ್ದರು. ಇದೀಗ ಮತ್ತೊಂದು ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ. ಕಿರಿದಾದ ತಿರುವು ಮುರುವು ರಸ್ತೆಯಲ್ಲಿ ವಾಹನ ದಟ್ಟಣೆಯಿಂದಾಗಿ ಪದೇ ಪದೆ ಅಪಘಾತ ಸಂಭವಿಸುತ್ತಿದೆ.

ಮೃತ ಪುರುಷೋತ್ತಮರ ತಂದೆ ಈ ಹಿಂದೆಯೇ ಮೃತಪಟ್ಟಿದ್ದು, ತಾಯಿ, ಇಬ್ಬರು ಸಹೋದರಿಯರನ್ನು ಪುರುಷೋತ್ತಮ್ ಅಗಲಿದ್ದಾರೆ. ಬದುಕಿಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬ ದುಃಖದ ಮಡುವಿನಲ್ಲಿ ಕೈತೊಳೆಯುತ್ತಿದೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.