ವಾಣಿಜ್ಯ ಜಾಹಿರಾತು
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆಯ ವಿವಿಧ ರೀತಿಯ ಅಭಿವೃದ್ಧಿ ಆಯಾಮಗಳ ಬಗ್ಗೆ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಕಾರ್ಯಕ್ರಮ ರೂಪಿಸುವಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೀನುಗಾರಿಕ ಬಂದರಿನಲ್ಲಿ ಮೂಲಸೌಲಭ್ಯ ಕಲ್ಪಿಸುವುದು, ಮೀನು ಉತ್ಪನ್ನ ಹೆಚ್ಚಿಸುವ ಕುರಿತು ಒಳನಾಡು ಮೀನುಗಾರಿಕೆ ಕೈಗೊಳ್ಳುವುದು, ಸಮುದ್ರ ಉತ್ಪನ್ನಗಳ ರಫ್ತು ದ್ವಿಗುಣಗೊಳಿಸುವುದು ಸೇರಿದಂತೆ ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ತಲಪಾಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಾಜಾಳಿವರೆಗಿನ ಮೀನುಗಾರಿಕಾ ರಸ್ತೆಯನ್ನು ಅಭಿವೃದ್ದಿಪಡಿಸುವ ಕುರಿತು ಈಗಾಗಲೇ ಕರಾವಳಿ ಅಭಿವೃದ್ದಿ ಪ್ರಾಧಿಕಾರದಿಂದ ಡಿಪಿಆರ್ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸದ್ರಿ ರಸ್ತೆ ಅಭಿವೃದ್ದಿಯಿಂದ ಮೀನುಗಾರರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಡೆಯಲಾಯಿತು. ಸಭೆಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರು ಯಶ್ಪಾಲ್ ಸುವರ್ಣ, ಮೀನುಗಾರಿಕಾ ವಿಶ್ವವಿದ್ಯಾನಿಲಯದ ಡೀನ್ ಡಾ. ಎ.ಸೆಂಥಿಲ್ವೇಲ್, ಮೀನುಗಾರಿಕೆ ಉಪನಿರ್ದೇಶಕ ಉದಯ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಮೀನುಗಾರಿಕ ಬಂದರಿನಲ್ಲಿ ಮೂಲಸೌಲಭ್ಯ ಕಲ್ಪಿಸುವುದು, ಮೀನು ಉತ್ಪನ್ನ ಹೆಚ್ಚಿಸುವ ಕುರಿತು ಒಳನಾಡು ಮೀನುಗಾರಿಕೆ ಕೈಗೊಳ್ಳುವುದು, ಸಮುದ್ರ ಉತ್ಪನ್ನಗಳ ರಫ್ತು ದ್ವಿಗುಣಗೊಳಿಸುವುದು ಸೇರಿದಂತೆ ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ತಲಪಾಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಾಜಾಳಿವರೆಗಿನ ಮೀನುಗಾರಿಕಾ ರಸ್ತೆಯನ್ನು ಅಭಿವೃದ್ದಿಪಡಿಸುವ ಕುರಿತು ಈಗಾಗಲೇ ಕರಾವಳಿ ಅಭಿವೃದ್ದಿ ಪ್ರಾಧಿಕಾರದಿಂದ ಡಿಪಿಆರ್ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸದ್ರಿ ರಸ್ತೆ ಅಭಿವೃದ್ದಿಯಿಂದ ಮೀನುಗಾರರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಡೆಯಲಾಯಿತು. ಸಭೆಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರು ಯಶ್ಪಾಲ್ ಸುವರ್ಣ, ಮೀನುಗಾರಿಕಾ ವಿಶ್ವವಿದ್ಯಾನಿಲಯದ ಡೀನ್ ಡಾ. ಎ.ಸೆಂಥಿಲ್ವೇಲ್, ಮೀನುಗಾರಿಕೆ ಉಪನಿರ್ದೇಶಕ ಉದಯ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ವಾಣಿಜ್ಯ ಜಾಹಿರಾತು