ವಾಣಿಜ್ಯ ಜಾಹಿರಾತು

ಮಂಗಳೂರು: ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ‌ ತುಳಿಯುತ್ತಾರೆ ಎಂದು ಶಾಸಕ ಡಾ. ಭರತ್ ‌ಶೆಟ್ಟಿ‌ ಹೇಳಿದ್ದು, ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು‌ ಮಾಜಿ ಶಾಸಕ ಮೊಯ್ದೀನ್ ಬಾವಾ ಶಾಸಕ ಭರತ್ ಶೆಟ್ಟಿಯವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ನಗರ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ‌ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ‌ ಹೆತ್ತವರು ಸಂಸ್ಕಾರ ಕಲಿಸಿದ್ದಾರೆ. ಇತರ ಧರ್ಮದ ಬಗ್ಗೆ ಗೌರವ ಕೊಡಲು ಕಲಿಸಿಕೊಟ್ಟಿದ್ದಾರೆ. ‌ಎಲ್ಲಿ ಯಾವಾಗ ಪ್ರಸಾದವನ್ನು ತುಳಿದಿದ್ದೇನೆ ಎಂದು ಸ್ಪಷ್ಟನೆ ನೀಡಲಿ ಎಂದರು.

ಗಣೇಶಪುರ ದೇಗುಲಕ್ಕೆ ಬಜೆಟ್ ನಲ್ಲಿ ಬಂದ 58 ಕೋಟಿ ರೂ.ನಲ್ಲಿ ಕಮಿಷನ್ ಪಡೆಯುವ ಉದ್ದೇಶದಿಂದ 40 ಕೋಟಿಯನ್ನು ವಾರ್ಡ್ ಗಳಿಗೆ ಹಂಚಿದ್ದಾರೆ. ಇದರ ಗುತ್ತಿಗೆಗಳನ್ನು ಮುಸ್ಲಿಂ ಗುತ್ತಿಗೆದಾರರಿಗೆ‌‌ ಕೊಟ್ಟು ಕಮಿಷನ್ ಪಡೆದಿರುವುದಕ್ಕೆ ಸಾಕ್ಷಿ ಇದೆ. ಬಹಿರಂಗವಾಗಿ ಚರ್ಚೆಗೆ ಬಂದರೆ ಯಾರಿಂದ ಕಮಿಷನ್ ಪಡೆದಿದ್ದೀರಿ ಎನ್ನುವುದನ್ನು ಬಹಿರಂಗ ಪಡಿಸುತ್ತೇನೆ‌‌ ಎಂದು ಬಹಿರಂಗ ಸವಾಲು ಎಸೆದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.