ವಾಣಿಜ್ಯ ಜಾಹಿರಾತು

ಉಡುಪಿ: ಪ್ರಮೋದ್ ಮುತಾಲಿಕ್ ಸ್ಪರ್ಧೆಯ ಉದ್ದೇಶ ಹಿಂದುತ್ವದ, ಜನತೆಯ ಹಿತ ಅಲ್ಲ, ಬದಲಾಗಿ ತನು ಮನ ಧನ ನೋಟಿಗಾಗಿ ಅನ್ನೋದು ಮುತಾಲಿಕ್ ಹೇಳಿಕೆಯಿಂದ ಸ್ಪಷ್ಟವಾಗಿದೆ. ಮುತಾಲಿಕ್ ಸ್ವಂತ ಬುದ್ದಿಯಿಂದ ನನ್ನ ವಿರುದ್ದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬದಲಾಗಿ ಆಮಿಷಕ್ಕೆ ಒಳಗಾಗಿಯೇ ಸ್ಪರ್ಧಿಸಲು ಬಯಸಿದ್ದಾರೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸಚಿವರು, ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ ! ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.

ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ   ಹಿಂದೆ ” ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದಿರಿ ಎಂದು ಬರೆದುಕೊಂಡಿದ್ದಾರೆ.

ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಮತದಾರರಿಂದ ಆರ್ಥಿಕ ಸಹಾಯ ಯಾಚಿಸಿದ್ದ ಮುತಾಲಿಕ್ ವೋಟಿನ ಜೊತೆ ನೂರರ ನೋಟು ಕೊಡಿ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.