ವಾಣಿಜ್ಯ ಜಾಹಿರಾತು

ಮಂಗಳೂರು: ತುಳುನಾಡಿನ ಭಾಗದ ಜನರ ಆರಾಧ್ಯ ದೈವ ಗುಳಿಗ. ಸಾಮಾನ್ಯವಾಗಿ ಗುಳಿಗ ದೈವರಕ್ಕೆ ಒಂದೇ ಸಮಯದಲ್ಲಿ ಎರಡೆರಡು ದೈವಗಳು ನರ್ತನ ಸೇವೆ ಮಾಡಲಾಗುತ್ತಿದೆ. ಆದರೆ ಕರಾವಳಿಯಲ್ಲಿ ಇದೇ ಮೊದಲ ಭಾರಿಗೆ 9 ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಗ್ರಾಮದಲ್ಲಿ ನವದುರ್ಗೆಯರ ದೇವಸ್ಥಾನವಿದೆ. ಈ ನವದುರ್ಗೆಯರ ದೇವಸ್ಥಾನದಲ್ಲಿ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ದುರ್ಗಾಪರಮೇಶ್ವರಿ ಕ್ಷೇತ್ರಪಾಲಕರಾಗಿ 9 ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

ಕಳೆದ ಕೆಲ ವರ್ಷಗಳ ಹಿಂದೆ ಬರ್ಕಾಜೆ ಗ್ರಾಮದಲ್ಲಿ ಪುನರ್ ನಿರ್ಮಾಣವಾದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವ ಗುಳಿಗ ದೈವಗಳು ಕ್ಷೇತ್ರಪಾಲಕರಾಗಿ ನೆಲೆಸಿದ್ದಾರೆ ಅನ್ನೋ ವಿಚಾರ ತಿಳಿದು ಬಂದಿದೆ. ಹೀಗಾಗಿ ಆ 9 ದೈವಗಳಿಗೂ ಏಕಕಾಲದಲ್ಲಿ ನರ್ತನ ಸೇವೆ ಮಾಡಲಾಗುತ್ತದೆ.

ಏಕಕಾಲದಲ್ಲಿ ನವಗುಳಿಗಗಳ ನರ್ತನ ಸೇವೆಯೂ ತುಳುನಾಡಿನ ಇತಿಹಾಸದಲ್ಲೇ ಮೊದಲನೆಯದ್ದಾಗಿದೆ. ಈ ನವ ನರ್ತನವನ್ನು ವೀಕ್ಷಿಸಲು ದೂರದ ಊರುಗಳಿಂದ ಸಾಕಷ್ಟು ಜನ ಆಗಮಿಸಿದ ಗುಳಿಗಗಳ ನರ್ತನ ಸೇವೆಯನ್ನು ಕಣ್ಮುಂಬಿಕೊಮಡಿದ್ದಾರೆ.

ನವದುರ್ಗೆಯರ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿದರೆ ನೆರವೇರುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಕರ್ನಾಟಕ ಹೊರತುಪಡಿಸಿ ಇತರ ಸ್ಥಳಗಳಿಂದಲೂ ಜನರು ಇಲ್ಲಿಗೆ ಬಂದು ದೇವರ ಸೇವೆಯನ್ನು ಮಾಡುತ್ತಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.