ವಾಣಿಜ್ಯ ಜಾಹಿರಾತು

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದೀಗ ಅವರ ಪುತ್ರ ಅಭಿಜಿತ್ ಮುಖರ್ಜಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಶನಿವಾರ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ನಿಮ್ಮೆಲ್ಲರ ಆಶಿರ್ವಾದದಿಂದ ಮತ್ತು ದೇವರ ದಯೆಯಿಂದ ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತಿದೆ. ಮಾತ್ರವಲ್ಲದೆ ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಅವರು ಶೀಘ್ರವಾಗಿ ಆರೋಗ್ಯವಂತರಾಗಿ ಮರಳುತ್ತಾರೆ ಎಂದು ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಮೊದಲು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಶಸ್ತ್ರ ಚಿಕಿತ್ಸೆಯ ನಂತರ ಅವರ ಸ್ಥಿತಿ ಗಂಭೀರಗೊಂಡು ಚೇತರಿಕೆಯ ಲಕ್ಷಣಗಳು ಕಂಡು ಬಂದಿರಲಿಲ್ಲ. ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ನೀಡಲಾಗಿದ್ದು, ಅವರ ರಕ್ತ ಸಂಚಾರ ಸ್ಥಿರವಾಗಿದೆಯೆಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಆ.12 ರಂದು ತಿಳಿಸಿದ್ದರು.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.