ವಾಣಿಜ್ಯ ಜಾಹಿರಾತು
ಮಂಗಳೂರು: ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಡೆದಿದೆ.
ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್, ಗಿರಿಜಾ ದಂಪತಿಯ ಪುತ್ರಿ, ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಪತ್ನಿ ದಿವ್ಯಾ (26) ಮೃತ ಮಹಿಳೆ.
ಕಳೆದ ಒಂದೂವರೆ ವರ್ಷದ ಹಿಂದೆ ಹರೀಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ದಿವ್ಯಾ ಇದೇ ಜ.21ರಂದು ದಿವ್ಯಾ ಪತಿ ಹರೀಶ್ ಜೊತೆ ಪಕ್ಕದ ಮನೆಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಈ ವೇಳೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿತೆನ್ನಲಾಗಿದೆ. ಇದರಿಂದ ಬೇಸರಗೊಂಡಿದ್ದ ದಿವ್ಯಾ ಒಬ್ಬರೇ ಮನೆಗೆ ಹಿಂದಿರುಗಿದ್ದರು. ಗಂಡನ ಜೊತೆಗಿನ ಮನಸ್ತಾಪದಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ದಿವ್ಯಾ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಾಣಿಜ್ಯ ಜಾಹಿರಾತು