ವಾಣಿಜ್ಯ ಜಾಹಿರಾತು
ಬಂಟ್ವಾಳ: ವಿದ್ಯಾದಾನ ಹಾಗೂ ಬಡವರ ಸೇವೆಯನ್ನೇ ಧ್ಯೇಯವಾಗಿರಿಸಿದ, ವೀರಾಂಜನೇಯ ಸೇವಾ ಸಮಿತಿ ಮಂಗಳೂರು ಇದೀಗ ತಮ್ಮ 47ನೇ ಸೇವಾ ಯೋಜನೆಯ ಸಹಾಯಹಸ್ತ ನೀಡಿ ಅಶಕ್ತರ ಪಾಲಿಗೆ ಬೆಳಕಾಗಿದೆ.
ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಪುರುಷೋತ್ತಮ ಎಂಬವರು ಕಳೆದ 25 ವರ್ಷದಿಂದ ಹೃದಯದ ಸಮಸ್ಯೆಯಿಂದ ಬಳತ್ತಿದ್ದರು. ಈಗಾಗಲೇ 2 ಬಾರಿ ಶಸ್ತ್ರಚಿಕಿತ್ಸೆ ಫಲಕಾರಿಯಾಗದೇ, ಮುಂದಿನ ಚಿಕಿತ್ಸೆಗೆ ಹಣದ ಅವಶ್ಯಕತೆ ಇದ್ದು, ಭರಿಸಲು ಸಾಧ್ಯವಾಗಲಿಲ್ಲ. ಈ ಬಡಕುಟುಂಬದ ಕಷ್ಟ ಅರಿತ ಶ್ರೀವೀರಾಂಜನೇಯ ಸೇವಾ ಸಮಿತಿಯು ತಮ್ಮ ತಂಡದಿಂದ ಸಂಗ್ರಹಿಸಿದ 13,000ರೂ. ಸಹಾಯಧನದ ಚೆಕ್ಕನ್ನು ತಂಡದ ಸಹೋದರರ ಸಮ್ಮುಖದಲ್ಲಿ ಪುರುಷೋತ್ತಮ ಕುಟುಂಬಕ್ಕೆ ಸಹಾಯಧನವನ್ನು ಹಸ್ತಾಂತರಿಸಿದರು.
ವೀರಾಂಜನೇಯ ಸೇವಾಸಂಸ್ಥೆಯು 4 ವರ್ಷ 11 ತಿಂಗಳ ಪಯಣದ ಸಾರ್ಥಕತೆಯ ಹಾದಿಯಲ್ಲಿ ಮುಂದುವರಿದಿದೆ. ಸುಮಾರು 51 ಅಶಕ್ತ ಬಡಕುಟುಂಬಗಳಿಗೆ ಸಹಾಯಹಸ್ತ ಕೋರಿದೆ.
ಈ ಯೋಜನೆಯ ಯಶಸ್ಸಿನೊಂದಿಗೆ 47 ಮಾಸಿಕ ಸೇವಾ ಯೋಜನೆ ಹಾಗೂ 5 ತುರ್ತು ಯೋಜನೆ ಯಶಸ್ವಿಗೊಳಿಸಿದೆ.
- ಸಹಾಯ ಸಣ್ಣಮಟ್ಟದ್ದಾಗಿರಲೀ, ದೊಡ್ಡದಾಗಿರಲೀ, ಸಹಾಯ ಸಹಾಯವೇ. ಯಾವುದೇ ಫಲಾಪೇಕ್ಷೆ ಇಲ್ಲದೇ, ನಿಸ್ವಾರ್ಥ ಮನಸ್ಸಿನಿಂದ ಮತ್ತೊಬ್ಬರಿಗೆ ಸಹಾಯಮಾಡುವ ಅದೆಷ್ಟು ಮಾನವೀಯಮುಖಗಳು ನಮ್ಮ ನಡುವೆ ಇದ್ದಾರೆ ಎನ್ನುವುದೇ ಹೆಮ್ಮೆ. ಇನ್ನೊಬ್ಬರ ಕಷ್ಟಕ್ಕೆ, ನೋವಿಗೆ ಸ್ಪಂದಿಸುವುದು ಸಹೃದಯಿಗಳಿಂದಷ್ಟೇ ಸಾಧ್ಯ. ಅಂತಹ ಸಹೃದಯಿಗಳು ತಾವಾಗಿದ್ದರೇ ಅಥವಾ ನಿಮಗೆ ತಿಳಿದಿದ್ದರೇ ಅಂಥವರನ್ನು ಪರಿಚಯಿಸುವುದು ನಮ್ಮ ಹೆಮ್ಮೆ. ‘ಸಹಾಯಹಸ್ತ’ ಎನ್ನುವ ಶೀರ್ಷಿಕೆಯಡಿ ನಾವು, ನೆರವಾದವರು ಹಾಗೂ ನೆರವು ಯಾಚಿಸುವವರಿಗೆ ಸಂಬಂಧಿಸಿ ವರದಿ ಪ್ರಕಟಿಸುತ್ತೇವೆ. ಇದರಿಂದ ನಿಮ್ಮ ಕಾರ್ಯಕ್ಕೆ ಶ್ಲಾಘನೆ, ನೆರವು ನೀಡಲು ಪ್ರೇರಣೆ ಜೊತೆಗೆ ಅಗತ್ಯವುಳ್ಳವರಿಗೆ ನೆರವು ಸಿಗಬಹುದೆಂಬ ನಿರೀಕ್ಷೆ ನಮ್ಮದು. ಒಂದು ಮಾತು, ನೀವು ಸಹಾಯಮಾಡುತ್ತಿರುವ ಭಾವಚಿತ್ರವನ್ನು ನಾವಿಲ್ಲಿ ಪ್ರಕಟಿಸುವುದಿಲ್ಲ. ನಿಮ್ಮ/ಸಂಘಟನೆ ಹೆಸರು ಪ್ರಕಟಿಸುತ್ತೇವೆ. ನೀವು ಬಯಸಿದ್ದಲ್ಲಿ ನಿಮ್ಮ/ ಸಂಘಟನೆ ಸದಸ್ಯರ ಭಾವಚಿತ್ರ ಮಾತ್ರ ಪ್ರಕಟಿಸುತ್ತೇವೆ. ಇನ್ನು ಸಹಾಯದ ನಿರೀಕ್ಷೆಯಲ್ಲಿರುವವರು ನೀವಾಗಿದ್ದರೇ, ನಿಮ್ಮ ಅನುಮತಿ ಇದ್ದಲ್ಲಿ ಮಾತ್ರ ಭಾವಚಿತ್ರ ಪ್ರಕಟಿಸುತ್ತೇವೆ.
ವಿವರಗಳನ್ನು ನಮ್ಮ ಸಂಖ್ಯೆ 6363376133 , 9019944921 ವಾಟ್ಸ್ಸ್ಯಾಪ್ ಮಾಡಿ. ಅಥವಾ [email protected] ಇ-ಮೈಲ್ ಮಾಡಿ.
ವಾಣಿಜ್ಯ ಜಾಹಿರಾತು